Community News | eSamudaay
Logo
Home News Login/Join
Sign In as Creator!

Top News!

Register Today for seamless updates!
ತೋಟಗಾರಿಕಾ ಬೆಳೆಗಳಲ್ಲಿ ಉತ್ತಮ ಗುಣಮಟ್ಟ ಹಾಗೂ ಇಳುವರಿಗಾಗಿ ಆಧುನಿಕ ನೀರಾವರಿ ಹಾಗೂ ರಸಾವರಿ ಪದ್ಧತಿಗಳು” ಕುರಿತು ತರಬೇತಿ ಕಾರ್ಯಕ್ರಮ
ಮುಖ್ಯಮಂತ್ರಿಗಳ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ 
ನೆರೆದ ಜನಸ್ತೋಮದ ಮನಸೂರೆಗೊಂಡ ಸ್ತಬ್ಧಚಿತ್ರ ಪೂರ್ವಾಭ್ಯಾಸದಲ್ಲಿ ಅತ್ಯಾಕರ್ಷಕವಾಗಿ ಮೂಡಿಬಂದ ಸ್ತಬ್ಧಚಿತ್ರ - ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ - ಆಯುಕ್ತ ಹೇಮಂತ ನಿಂಬಾಳ್ಕರ್
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ - 2025 ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ

Community News

ತೋಟಗಾರಿಕಾ ಬೆಳೆಗಳಲ್ಲಿ ಉತ್ತಮ ಗುಣಮಟ್ಟ ಹಾಗೂ ಇಳುವರಿಗಾಗಿ ಆಧುನಿಕ ನೀರಾವರಿ ಹಾಗೂ ರಸಾವರಿ ಪದ್ಧತಿಗಳು” ಕುರಿತು ತರಬೇತಿ ಕಾರ್ಯಕ್ರಮ
  ಬೆಂಗಳೂರು :  ನಿಖರ ಬೇಸಾಯ ಅಭಿವೃದ್ಧಿ ಕೇಂದ್ರ, ತೋಟಗಾರಿಕೆ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು ಹಾಗೂ ಯಲಹಂಕ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸರ್ವಿಸ್ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ತೋಟಗಾರಿಕಾ ಬೆಳೆಗಳಲ್ಲಿ ಉತ್ತಮ ಗುಣಮಟ್ಟ ಹಾಗೂ ಇಳುವರಿಗಾಗಿ ಆಧುನಿಕ ನೀರಾವರಿ ಹಾಗೂ ರಸಾವರಿ ಪದ್ಧತಿಗಳು” ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಬೆಂಗಳೂರಿನ ಯಲಹಂಕ ಮಹಾಯೋಗಿ ಮೇಮನ ಸಹಕಾರ ಬ್ಯಾಂಕ್‍ನ ಅಧ್ಯಕ್ಷರಾದ ಮುನಿ ರೆಡ್ಡಿ ಅವರು ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು....
ಮುಖ್ಯಮಂತ್ರಿಗಳ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ
  ಬೆಂಗಳೂರು : ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ ವಿನಿಮಯ ನಡೆಸಲಾಯಿತು. ಕಂಪನಿಯು...
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ 
  ಬೆಂಗಳೂರು :  ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128...
ನೆರೆದ ಜನಸ್ತೋಮದ ಮನಸೂರೆಗೊಂಡ ಸ್ತಬ್ಧಚಿತ್ರ ಪೂರ್ವಾಭ್ಯಾಸದಲ್ಲಿ ಅತ್ಯಾಕರ್ಷಕವಾಗಿ ಮೂಡಿಬಂದ ಸ್ತಬ್ಧಚಿತ್ರ - ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ - ಆಯುಕ್ತ ಹೇಮಂತ ನಿಂಬಾಳ್ಕರ್
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025    ನವದೆಹಲಿ:  ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯ ಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ "ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು" ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್...
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ - 2025 ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ
ಬೆಂಗಳೂರು:  ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‍ಪಥ್) ಇದೇ ಜನವರಿ 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯ ಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ....
ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರು ನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ
  ಶಿವಮೊಗ್ಗ: ಇಂದಿನ ಯುಗವು ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಯಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನಗಳು, ಸಾವಯವ ಕೃಷಿ ಮತ್ತು ಸ್ಮಾರ್ಟ್ ಕೃಷಿಯಂತಹ ವಿಷಯಗಳ ಮೇಲೆ ಕೇಂದ್ರೀಕರಿಸುವುದು ಅವಶ್ಯಕ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ...
ಪಡೆದ ‘ಜ್ಞಾನ' ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಮುಡಿಪಾಗಿರಲಿ: ರಾಜ್ಯಪಾಲರ ಕರೆ
  ಶಿವಮೊಗ್ಗ/  ವಿದ್ಯಾರ್ಥಿಗಳು ಗಳಿಸಿದ ಜ್ಞಾನವನ್ನು ತಮ್ಮ ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಸಮಾಜ, ದೇಶ ಮತ್ತು ಪರಿಸರದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಘಟಿಕೋತ್ಸವ ಸಮಾರಂಭವು ವಿದ್ಯಾರ್ಥಿಗಳ ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಇದು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಆಚರಣೆ ಮಾತ್ರವಲ್ಲ, ಇದು ನಿಮ್ಮ ಕನಸುಗಳ ಹಾರಾಟದ ಆರಂಭವಾಗಿದೆ....
ನೂತನವಾಗಿ ನಿರ್ಮಿಸಿದ ನಗರ ಮತ್ತು ಉಪನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ.
  ಬೆಂಗಳೂರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ, ಅವರು ಇಂದು ಹುಬ್ಬಳ್ಳಿ ಚೆನ್ನಮ್ಮ ವೃತ್ತದ ಬಳಿ ನೂತನವಾಗಿ ನಿರ್ಮಿಸಲಾದ ನಗರ ಮತ್ತು ಉಪನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿದರು. ಅಲ್ಲಿನ ಬಸ್ ನಿಲುಗಡೆ ಅಂಕಣಗಳು ಹಾಗೂ ಪ್ರಯಾಣಿಕರ ನಿರೀಕ್ಷಣಾ ಅಂಕಣಗಳು, ಪ್ರಯಾಣಿಕರಿಗೆ ನೂತನ ಮಾದರಿಯ ಆಸನಗಳ ವ್ಯವಸ್ಥೆ, ಪುರುಷರು ಹಾಗೂ ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕ ಶೌಚಾಲಯಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ,...
ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ರಾಜ್ಯಪಾಲರು
   ತುಮಕೂರು: ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣವು ಸೇವೆ, ಸಮರ್ಪಣೆ ಮತ್ತು ಪರೋಪಕಾರದ ವಿಶಿಷ್ಟ ಉದಾಹರಣೆಯಾಗಿದೆ. ನಿಜವಾದ ಮಾನವೀಯತೆಯು ಜಾತಿ, ಧರ್ಮ ಮತ್ತು ಭೌತಿಕತೆಯನ್ನು ಮೀರಿದೆ ಎಂದು ಅವರ ಜೀವನ ನಮಗೆ ಕಲಿಸುತ್ತದೆ. ಅವರ ಕೊಡುಗೆ ಸದಾ ಸ್ಪೂರ್ತಿದಾಯಕವಾಗಿರುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಶಿವಕುಮಾರ...
ಫೆಬ್ರವರಿ 25 ಮತ್ತು 26 ರಂದು ಗುವಾಹಟಿಯಲ್ಲಿ ‘ಅಡ್ವಾಂಟೇಜ್ ಅಸ್ಸಾಂ-2.0 ಸಮಾವೇಶ’: ಸಚಿವ ಅಶೋಕ್ ಸಿಂಘಾಲ್
  ಬೆಂಗಳೂರು : ಅಸ್ಸಾಂನ ಗುವಾಹಟಿಯಲ್ಲಿ  ಫೆಬ್ರವರಿ 25 ಹಾಗೂ 26 ರಂದು ‘ಅಡ್ವಾಂಟೇಜ್ ಅಸ್ಸಾಂ-2.0” ಅಸ್ಸಾಂನಲ್ಲಿ ಹೂಡಿಕೆ ಮತ್ತು ಮೂಲಸೌಕರ್ಯ ಉತ್ತೇಜಿಸಲು ಸಮ್ಮಿಟ್ -2025 ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಸ್ಸಾಂನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ನೀರಾವರಿ ಸಚಿವರಾದ ಅಶೋಕ್ ಸಿಂಘಾಲ್ ತಿಳಿಸಿದರು. ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಈ ಕುರಿತು ಹಮ್ಮಿಕೊಳ್ಳಲಾದ ‘ರೋಡ್ ಶೋ’ ಹಾಗೂ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಸ್ಸಾಂ ಸರ್ಕಾರ ಹಾಗೂ ಅಸ್ಸಾಂ ಕೈಗಾರಿಕಾಭಿವೃದ್ಧಿ...
ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ
   ಬೆಂಗಳೂರು : ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು. ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ. ಅವರು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾನ್ಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪಿ.ಆರ್.ಕಿರಣಗಿ ಅವರು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಕುರಿತು ಮಾತನಾಡಿ ಅಂದಿನ ಸಮಾಜದಲ್ಲಿ ಪ್ರಚಲಿತವಿದ್ದ ಮೂಢನಂಬಿಕೆ ಕಂದಾಚಾರ, ಡಂಬಾಚಾರ ಮತ್ತು...
ವಿಶಿಷ್ಟ ಚೇತನ ಕ್ರೀಡಾಪಟುಗಳಿಗೆ ವಿವಿಧ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವ ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿರುವ ತರಬೇತುದಾರ –  ರಾಹುಲ್ ಬಾಲಕಷ್ಣ
  ಬೆಂಗಳೂರು:  ವಿಶಿಷ್ಟ ಚೇತನ ಕ್ರೀಡಾಪಟುಗಳಿಗೆ ವಿವಿಧ ರೀತಿಯಲ್ಲಿ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡಿ ಬೆಂಬಲಿಸುತ್ತಿರುವ ಕರ್ನಾಟಕ ಸರ್ಕಾರಕ್ಕೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ರೈಲ್ವೇ ಇಲಾಖೆಯಲ್ಲಿ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ರಾಹುಲ್ ಬಾಲಕೃಷ್ಣ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಶ್ರೀಯುತರು 2016ರಿಂದ ವಿಶೇಷ ಚೇತನ ಕ್ರೀಡಾಪಟುಗಳಿಗೆ 1500 ಮೀಟರ್‍ನ ಮಧ್ಯಮ ದೂರದ ಓಟದಲ್ಲಿ ತರಬೇತಿ ನೀಡುತ್ತಿದ್ದಾರೆ ತರಬೇತಿ ನೀಡಿದ ವಿಶೇಷ ಚೇತನ ಅಂಧ ಕ್ರೀಡಾಪಟು ಕು. ರಕ್ಷಿತಾ ರಾಜು ಇವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ...
ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
  ಬೆಳಗಾವಿ : 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ "ಗಾಂಧಿ ಭಾರತ ಮರು ನಿರ್ಮಾಣ" ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು. ಸುವರ್ಣ ಸೌಧದ...
ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ "ಗಾಂಧೀ ಭಾರತ ನಿರ್ಮಾಣದ ಕನಸು"
  ಬೆಳಗಾವಿ : ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕ ತಿರುಗಿಸುವ ಮೂಲಕ ಇಂದು ಅನಾವರಣಗೊಳಿಸಿದರು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ ಕರ್ನಾಟಕಕ್ಕೆ ಗೌರವ ತಂದಿದೆ...
ಕಬ್ಬು ಹಾನಿಗೆ ಪರಿಹಾರ ನೀಡಲು ನಿಧಿ ಸ್ಥಾಪನೆ ಈ ವರ್ಷದಿಂದ ಪ್ರತಿ ವರ್ಷ 50 ಲಕ್ಷ ರೂ. ನಿಧಿ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ
  ವಿಜಯಪುರ:  ಅಗ್ನಿ ದುರಂತದಲ್ಲಿ ಸಂಭವಿಸುವ ಕಬ್ಬಿನ ಹಾನಿಗೆ ಪರಿಹಾರ ನೀಡಲು ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ನಿಧಿ ಸ್ಥಾಪಿಸಲಿದ್ದು, ಈ ವರ್ಷದಿಂದಲೇ ರೂ 50 ಲಕ್ಷ ತೆಗೆದಿರಿಸಲಾಗುವುದು ಎಂದು ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಘೋಷಣೆ ಮಾಡಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜೇರಿ ನೇತೃತ್ವದ ರೈತ ಮುಖಂಡರೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ ಸಚಿವರು,...
ತೊಗರಿ ಖರೀದಿಗೆ ರಾಜ್ಯ ಸರ್ಕಾರದಿಂದ ರೂ 140 ಕೋಟಿ ಕ್ವಿಂಟಾಲ್‍ಗೆ ಹೆಚ್ಚುವರಿ ರೂ. 450 ಘೋಷಣೆ; 400ಕ್ಕೂ ಅಧಿಕ ಖರೀದಿ ಕೇಂದ್ರ: ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
  ವಿಜಯಪುರ :ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‍ಗೆ ಹೆಚ್ಚುವರಿ ರೂ 450 ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ ರೂ. 140 ಕೋಟಿ ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು. ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ ಕ್ರಿಂಟಾಲ್‍ಗೆ ಎಂಟು...
ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ - 2025
ಸಾವಯವ ಕೃಷಿಗೆ ಹೆಚ್ಚಿನ ಪ್ರಚಾರ ಅಗತ್ಯ– ಎನ್.ಚೆಲುವರಾಯಸ್ವಾಮಿ ಬೆಂಗಳೂರು:  ಕರ್ನಾಟಕ ಸರ್ಕಾರವು ಸುಮಾರು 2 ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ದತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ. ಸ್ವಾವಲಂಬನೆ, ಗ್ರಾಮೀಣಾಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ಒತ್ತು ನೀಡಲು 2004 ರಲ್ಲಿ ಪ್ರತ್ಯೇಕ ಸಾವಯವ ಕೃಷಿ ನೀತಿಯನ್ನು ಹೊರತರಲಾಗಿರುತ್ತದೆ. ಈ ನೀತಿಯಡಿಯಲ್ಲಿ ರಾಜ್ಯಾದ್ಯಂತ ವಿವಿಧ ಸಾವಯವ ಕೃಷಿ ಉತ್ತೇಜನಾ ಕಾರ್ಯಕ್ರಮಗಳಾದ ಸಾವಯವ ಗ್ರಾಮ, ಪ್ರಮಾಣೀಕರಣ, ಸಂಸ್ಕರಣೆ ಮುಂತಾದ ಸಾವಯವ ಕೃಷಿ ಪ್ರಚಾರ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿರುತ್ತದೆ...
ಜನವರಿ 22 ರಂದು  ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ
  ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ-2022, ಸಾಹಿತ್ಯಶ್ರೀ ಪ್ರಶಸ್ತಿ -2022 ಹಾಗೂ ಪುಸ್ತಕ ಬಹುಮಾನ 2021ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 22 ರಂದು ಕೊಪ್ಪಳದ ಹೊಸಪೇಟೆ ರಸ್ತೆ, ಬಿ.ಎಸ್.ಪವಾರ್ ಗ್ರ್ಯಾಂಡ್ ಹೋಟೆಲ್ ಹತ್ತಿರ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ  ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಪ್ರಶಸ್ತಿ ಪ್ರದಾನ...
ಒಲೆಕ್ಟ್ರಾ ಆವಿಷ್ಕಾರಗಳಿಗೆ ವೇದಿಕೆಯಾದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025
  • ಒಲೆಕ್ಟ್ರಾ ಬಸ್ ಗಳಲ್ಲಿ ಹೊಸ ವೈಶಿಷ್ಟ್ಯ: ಆರಾಮ ಮತ್ತು ಸುರಕ್ಷತೆ ಮರುವ್ಯಾಖ್ಯಾನ• ಬ್ಲೇಡ್ ಬ್ಯಾಟರಿ ತಂತ್ರಜ್ಞಾನ: ಸುರಕ್ಷಿತ ಮತ್ತುಪರಿಣಾಮಕಾರಿ ಎಲೆಕ್ಟ್ರಿಕ್ ಮೊಬಿಲಿಟಿಯ ಭವಿಷ್ಯ• ಹೊಸ ಬ್ಯಾಟರಿ ತಂತ್ರಜ್ಞಾನದಿಂದ ಇವಿ ಮೊಬಿಲಿಟಿಯಲ್ಲಿ ಕ್ರಾಂತಿ• ಒಂದು ಚಾರ್ಜಿಂಗ್‌ಗೆ ೫೦೦ ಕಿ.ಮೀ. ಸವಾರಿ: ೫೦೦೦ಕ್ಕೂ ಹೆಚ್ಚು ಬಾರಿ ಚಾರ್ಜಿಂಗ್‌ ಕ್ಷಮತೆ ಬೆಂಗಳೂರು:   ಭಾರತದ ಪ್ರಮುಖ ಎಲೆಕ್ಟ್ರಿಕ್ ಬಸ್ ತಯಾರಕ ಮತ್ತು ಎಲೆಕ್ಟ್ರಿಕ್ ಮೊಬಿಲಿಟಿಯಲ್ಲಿ ಪ್ರವರ್ತಕರಾದ ಒಲೆಕ್ಟ್ರಾ ಗ್ರೀನ್ ಟೆಕ್ ಲಿಮಿಟೆಡ್ (ಒಜಿಎಲ್) ಸುಸ್ಥಿರ ಪರಿಹಾರಗಳ...
ಮನುವಾದಿಗಳು, ಪುರೋಹಿತಶಾಹಿಗಳು ಎಂದು ಹೇಳುವುದು ಕೆಲವರಿಗೆ ಚಾಳಿಯಾಗಿ ಬಿಟ್ಟಿದೆ, ವಿದ್ವಾನ್ ವೇ.  ನಾರಾಯಣ ಭಟ್ ಬೆಣ್ಣೆಗದೆ ಅಭಿಪ್ರಾಯ.
  ಕಾರವಾರ: ಸಮಾಜದ ಸರ್ವತೋಮುಖ ಅಭಿವೃದ್ದಿಯನ್ನು ಬಯಸುತ್ತ, ಸಮಸ್ತರಿಗೂ ಸನ್ಮಂಗಲವಾಗಲಿ, ಸತ್ಯ, ಧರ್ಮ ನಿಷ್ಟೆ, ಸ್ವಾಭಿಮಾನದ ಭದ್ರ ಬುನಾದಿಯ  ನಾಡು ನಮ್ಮದಾಗಲಿ ಎಂದು ನಿತ್ಯ ಪಾಠ ಪ್ರವಚನ ಮಾಡುವ ಜನರಿಗೆ, ಇಂದು ಹೀಯಾಳಿಸುವ ಪ್ರಯತ್ನ ನಿತ್ಯವೂ ನಡೆಯುತ್ತಿದೆ. ವೇದಿಕೆಗಳು ಸಿಕ್ಕಾಗಲೆಲ್ಲ ಮನುವಾದಿಗಳು, ಪುರೋಹಿತಶಾಹಿಗಳು ಎಂದು ಹೇಳುವುದು ಕೆಲವರಿಗೆ ಚಾಳಿಯಾಗಿ ಬಿಟ್ಟಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ತಿನ ಉತ್ತರ ಕನ್ನಡ‌ ಜಿಲ್ಲಾದ್ಯಕ್ಷರಾದ ವಿದ್ವಾನ್ ವೇ. ಶ್ರೀ ನಾರಾಯಣ...