ಬೆಂಗಳೂರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ಶಿವಶರಣ ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವದರ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಿವ ಶರಣ ಶ್ರೀ ಮಡಿವಾಳ ಮಾಚಿದೇವರ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರಾದ ವಿವೇಕಾನಂದ ವಿಶ್ವಜ್ಞ ಅವರು ಮಾತನಾಡಿ, ಶಿವ ಶರಣ ಶ್ರೀ ಮಡಿವಾಳ ಮಾಚಿದೇವರ 12 ನೇ ಶತಮಾನದಲ್ಲಿ ಮೇಲು-ಕೀಳು ಹಾಗೂ ಮೂಡನಂಭಿಕೆಗಳನ್ನು ದಿಕ್ಕರಿಸಿ ಸಮಾಜಕ್ಕೆ ಸಮಾನತೆಯ ಸಂದೇಶವನ್ನು ನೀಡಿದ್ದಾರೆ ಮತ್ತು ಅವರ ಜೀವನ ಸಂದೇಶಗಳನ್ನು ಅರಿತು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯವಿದೆ ಎಂದು ತಿಳಿಸಿದರು.
ವಿರೂಪಾಕ್ಷ ಕಟ್ಟಿಮನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಇಲಾಖಾ ಮುಖ್ಯಸ್ಥರಾದ, ಪಿ.ವೈ. ನಾಯಕ, ಶ್ರೀಮತಿ ವಿಜಯಶ್ರೀ ನರಗುಂದ, ಪ್ರಸನ್ ಕುಮಾರ ಬಾಲಾನಾಯಕ್, ಶ್ರೀಮತಿ ಮಾಲತಿ.ಎಸ್.ಎಸ್, ಶ್ರೀನಾಥ.ಜಿ, ಶ್ರೀಮತಿ ಜಗದಂಬಾ ಕೊಪರ್ಡೆ ಹಾಗೂ ಅಧಿಕಾರಿಗಳಾದ ಎಂ.ಬಿ. ಕಪಲಿ, ಹನುಮೇಗೌಡರ, ನವೀನಕುಮಾರ ತಿಪ್ಪಾ ಹಾಗೂ ಕೇಂದ್ರ ಕಛೇರಿಯ ಇನ್ನಿತರ ಅಧಿಕಾರಿಗಳು/ಸಿಬ್ಬಂದಿಗಳು ಉಪಸ್ಥಿತರಿದ್ದರು.
Publisher: eSamudaay